Wednesday, 13 December 2023

Yuva Nidhi Scheme: ಕಾಂಗ್ರೆಸ್​ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ಮುಹೂರ್ತ ಫಿಕ್ಸ್​​; 5 ಲಕ್ಷ ಪದವೀಧರರ ಖಾತೆಗೆ ಹಣ



ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಜಾರಿಗೆ ದಿನಾಂಕ ನಿಗಧಿಯಾಗಿದೆ. ಕಾಂಗ್ರೆಸ್‌ ಪಕ್ಷ ಚುನಾವಣೆಗೂ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಯುವನಿಧಿ ಕೂಡ ಒಂದಾಗಿದೆ. ಯುವನಿಧಿ ಗ್ಯಾರಂಟಿಯು ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ.ಹೌದು, ಯುವನಿಧಿ ಯೋಜನೆ ಜಾರಿಗೆ ಕೊನಗೂ ದಿನಾಂಕ ನಿಗಧಿ ಮಾಡಲಾಗಿದೆ. ಸರ್ಕಾರ ನೀಡಿರುವ ಮಾಹಿತಿಯಂತೆ ಇದೇ ಡಿಸೆಂಬರ್‌ 21ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಹಾಗಾದ್ರೆ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಬೇಕಾದ ದಾಖಲೆಗಳೇನು? ಯಾರೆಲ್ಲಾ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.ಯುವನಿಧಿ ಯೋಜನೆಗೆ 2022-23ರಲ್ಲಿ ತೇರ್ಗಡೆಯಾದ ಪದವೀಧರ ಹಾಗೂ ಡಿಪ್ಲೊಮ ಉತ್ತೀರ್ಣರಾದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ ತಾವು ಉತ್ತೀರ್ಣರಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ದಿನಾಂಕದಿಂದ ತಾವು ಉದ್ಯೋಗ ಸಿಗುವವರೆಗೆ ಮಾತ್ರ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು. ಇಲ್ಲವೇ ಎರಡು ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಸೌಲಭ್ಯ ಪಡೆದುಕೊಳ್ಳಬಹುದು

ಯುವನಿಧಿಗೆ ಯಾರು ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯವಿಲ್ಲ:

* ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದವರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ.

* ಅಪ್ರೆಂಟಿಸ್‌ ಹುದ್ದೆಯಲ್ಲಿರುವವರಿಗೆ ಇದರ ಲಾಭ ದೊರೆಯದು.

* ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.


ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್‌ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ.


ಯುವನಿಧಿ ಹಣ ಬರುವುದು ಯಾವಾಗ?

ಇನ್ನು ಈ ಯೋಜನೆಯೆ ಮೊದಲ ಕಂತಿನ ಹಣ 2024 ರ ಜನವರಿ ತಿಂಗಳಿಂದಲೇ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಇದು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ಅನ್ವಯವಾಗಲಿದೆ. ಅಂದರೆ ಈ ಸಾಲಿನಲ್ಲಿ ಉತೀರ್ಣವಾಗಿರುವ ಪದವೀಧರ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಸಲುವಾಗಿಯೇ ಈ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...