Wednesday, 3 January 2024

ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು


Sauram News 

ಬೆಂಗಳೂರು, ಜ.03: ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು ನೀಡಿದೆ. ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ.ವೈ.ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಎಂಬುವವರು ದೂರು ಸಲ್ಲಿಸಿದ್ದಾರೆ.ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಿನ್ನೆ(ಜ.02) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ, ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಈ ಸರ್ಕಾರ ಹಿಂದೂ ಬಿಜೆಪಿ‌ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ‌ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ‌ ಸರ್ಕಾರ, ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು‌ ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ ಎಂದಿದ್ದರು.

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...