Tuesday, 9 January 2024

ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ನೋಟಿಸ್ ಜಾರಿ


ಸರ್ಕಾರಿ ಬಂಗಲೆಯನ್ನು ತೆರವು ಮಾಡದಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ (ಡಿಒಇ) ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ನಗರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿಯನ್ನು ನೀಡಿದೆ.ಕಳೆದ ವರ್ಷ ಡಿಸೆಂಬರ್ 8 ರಂದು ತೃಣಮೂಲ ಕಾಂಗ್ರೆಸ್ ಸಂಸದೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಅವರ ಖಾತೆಯನ್ನು ರದ್ದುಗೊಳಿಸಿದ್ದರಿಂದ ಜನವರಿ 7 ರೊಳಗೆ ಬಂಗಲೆಯನ್ನು ಖಾಲಿ ಮಾಡುವಂತೆ ತಿಳಿಸಲಾಯಿತು. ಆದರೆ ಇದುವರೆಗೂ ಬಂಗಲೆ ಖಾಲಿ ಮಾಡದ ಕಾರಣ ಶೋಕಾಸ್ ನೋಟಿಸ್‌ ನೀಡಿದ್ದು 3 ದಿನಗಳಲ್ಲಿ ಉತ್ತರಿಸುವಂತೆ ಎಸ್ಟೇಟ್ ನಿರ್ದೇಶನಾಲಯ ಕೇಳಿದೆ.ಮೊಯಿತ್ರಾ ಅವರಿಗೆ ನೀಡಲಾದ ಶೋಕಾಸ್ ನೊಟೀಸ್ ನಲ್ಲಿ ಸರ್ಕಾರಿ ಬಂಗಲೆಯನ್ನು ಏಕೆ ಇನ್ನೂ ತೆರವು ಮಾಡಿಲ್ಲ ಎಂದು ಕೇಳಲಾಗಿದ್ದು ಇದಕ್ಕೆ ಉತ್ತರ ನೀಡುವಂತೆ ಕೇಳಿದೆ.

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...