Friday, 5 January 2024

ಬೆಂಗಳೂರು: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್​ ಬೆದರಿಕೆ ಕರೆ.


ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ (ಜ.06) ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ.ಕೂಡಲೇ ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...