ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಿ.ಟಿ.ರವಿ, ಸುನೀಲ್ ಕುಮಾರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೂ ಆದ ಡಿ. ಕೆ.ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಬಿಜೆಪಿ ಕಾನೂನು ಘಟಕದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಎಂಬವರು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಾಂಗ್ರೆಸ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ಮಾರ್ಫ್ ಮಾಡಿದ ಫೋಟೋಗಳನ್ನು ಬಳಸಿ ತಿರುಚಿದ ಹಾಗೂ ದಾರಿತಪ್ಪಿಸುವ ಸುಳ್ಳು ಪೋಸ್ಟ್ಗಳನ್ನು ಹಾಕಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದ ಜನರಲ್ಲಿ ದ್ವೇಷ ಹುಟ್ಟಿಸಲು ಹಾಗೂ ಬಿಜೆಪಿ ನಾಯಕರ ಹೆಸರಿಗೆ ಮಸಿ ಬಳಿಯಲು ಯತ್ನಿಸಲಾಗಿದೆ. ಈ ರೀತಿಯ ಫೋಸ್ಟ್ಗಳು ಬಿಜೆಪಿ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವ ಮತ್ತು ಶಾಂತಿಗೆ ಭಂಗ ತರುವ ಉದ್ದೇಶ ಹೊಂದಿದೆ. ಇದು ಕೆಲ ವರ್ಗದ ಜನರನ್ನು ಉದ್ವಿಘ್ನಗೊಳಿಸುತ್ತದೆ. ಈ ರೀತಿ ಗೊಂದಲ ಉಂಟುಮಾಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳಿಗೆ ಗೊತ್ತಿದ್ದರೂ, ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರಿಂದ ಶಿವಕುಮಾರ್ ಹಾಗೂ ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯೋಗೇಂದ್ರ ಹೂಡಘಟ್ಟ ದೂರಿನಲ್ಲಿ ಆರೋಪಿಸಿದ್ದಾರೆ.
Sunday, 7 January 2024
ಡಿಕೆಶಿ, ಫೇಸ್ಬುಕ್ ಖಾತೆ ನಿರ್ವಾಹಕರ ವಿರುದ್ಧ ದೂರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಿ.ಟಿ.ರವಿ, ಸುನೀಲ್ ಕುಮಾರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೂ ಆದ ಡಿ. ಕೆ.ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಬಿಜೆಪಿ ಕಾನೂನು ಘಟಕದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಎಂಬವರು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಾಂಗ್ರೆಸ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ಮಾರ್ಫ್ ಮಾಡಿದ ಫೋಟೋಗಳನ್ನು ಬಳಸಿ ತಿರುಚಿದ ಹಾಗೂ ದಾರಿತಪ್ಪಿಸುವ ಸುಳ್ಳು ಪೋಸ್ಟ್ಗಳನ್ನು ಹಾಕಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದ ಜನರಲ್ಲಿ ದ್ವೇಷ ಹುಟ್ಟಿಸಲು ಹಾಗೂ ಬಿಜೆಪಿ ನಾಯಕರ ಹೆಸರಿಗೆ ಮಸಿ ಬಳಿಯಲು ಯತ್ನಿಸಲಾಗಿದೆ. ಈ ರೀತಿಯ ಫೋಸ್ಟ್ಗಳು ಬಿಜೆಪಿ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವ ಮತ್ತು ಶಾಂತಿಗೆ ಭಂಗ ತರುವ ಉದ್ದೇಶ ಹೊಂದಿದೆ. ಇದು ಕೆಲ ವರ್ಗದ ಜನರನ್ನು ಉದ್ವಿಘ್ನಗೊಳಿಸುತ್ತದೆ. ಈ ರೀತಿ ಗೊಂದಲ ಉಂಟುಮಾಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳಿಗೆ ಗೊತ್ತಿದ್ದರೂ, ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರಿಂದ ಶಿವಕುಮಾರ್ ಹಾಗೂ ಅವರ ಫೇಸ್ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯೋಗೇಂದ್ರ ಹೂಡಘಟ್ಟ ದೂರಿನಲ್ಲಿ ಆರೋಪಿಸಿದ್ದಾರೆ.
Subscribe to:
Post Comments (Atom)
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...
-
ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದ...
-
ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ...
-
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದ...

No comments:
Post a Comment