Wednesday, 28 August 2024

ಕೋಲ್ಕತ್ತ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.





“ಈ ಘಟನೆಯಿಂದ ನಾನು ಭೀತಳಾಗಿದ್ದೇನೆ. ಸಮಾಜದ ಸಾಮೂಹಿಕ ಮರೆವಿನ ಪರಿಣಾಮದಿಂದ ಈ ಅಸಹ್ಯದ ಕೃತ್ಯ ನಡೆದಿದೆ’ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುರ್ಮು, “ಹೆಣ್ಣನ್ನು ಗಂಡಿನಂತೆಯೇ ಪೂರ್ಣ ರೀತಿಯಲ್ಲಿ ಮನುಷ್ಯರಂತೆ ಕಾಣದಿರುವುದು, ಕಡಿಮೆ ಶಕ್ತಿಶಾಲಿ, ಕಡಿಮೆ ಸಮರ್ಥಳು, ಕಡಿಮೆ ಬುದ್ಧಿವಂತಳು ಎಂದು ನೋಡುವ ಹೀನಾಯ ಮನಃಸ್ಥಿತಿಯಿಂದ ಕ್ರೂರ ಅತ್ಯಾಚಾರಗಳು ಸಂಭವಿಸುತ್ತಿವೆ. ಯಾವ ನಾಗರಿಕ ಸಮಾಜವೂ ತನ್ನ ಮಗಳು, ಸಹೋದರಿಯರನ್ನು ಇಂತಹ ದೌರ್ಜನ್ಯಕ್ಕೆ ಒಳಪಡಿಸುವುದಿಲ್ಲ. ಇದು ಅತಿಯಾಯಿತು. 2012ರಲ್ಲಿ ದಿಲ್ಲಿಯಲ್ಲಿ “ನಿರ್ಭಯಾ’ ಪ್ರಕರಣ ನಡೆದು 12 ವರ್ಷಗಳಾಗಿವೆ. ತದನಂತರವೂ ಅಸಂಖ್ಯಾಕ ಅತ್ಯಾಚಾರಗಳು ನಡೆದಿವೆ. ಈ ಸಾಮೂಹಿಕ ಮರೆವು ಅಸಹ್ಯಕರ’ ಎಂದು ಮುರ್ಮು ಹೇಳಿದ್ದಾರೆ.

“ಇತಿಹಾಸವನ್ನು ಎದುರಿಸಲು ಹೆದರುವ ಸಮಾಜಗಳು ಮಾತ್ರ ಸಾಮೂಹಿಕ ಮರೆವಿಗೆ ಶರಣಾಗುತ್ತವೆ. ಭಾರತ ಇತಿಹಾಸವನ್ನು ಎಲ್ಲ ರೀತಿಯಿಂದ ಎದುರಿಸಲೇಬೇಕು. ಇಂತಹ ವಿಕೃತಿಗಳ ವಿರುದ್ಧ ಸಮಗ್ರವಾದ ಕ್ರಮ ತೆಗೆದುಕೊಂಡು, ಈಗಲೇ ಅದನ್ನು ಹೊಸಕಿ ಹಾಕೋಣ’ ಎಂದು ರಾಷ್ಟ್ರಪತಿ ಮುರ್ಮು ಖಾರವಾದ ಶಬ್ದಗಳಲ್ಲಿ ಹೇಳಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿತ್ತು. ಬಳಿಕ ಬೆಲೊರೊ ವಾಹನದಿಂದ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ.



ಇನ್ನು ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿ ದರ್ಶನ್ ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಸೆಪ್ಟೆಂಬರ್ 11ಕ್ಕೆ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆಯಲಿದೆ.

Friday, 9 August 2024

ನಾಗರಪಂಚಮಿಗೆ ಇಲ್ಲಿ ಜೀವಂತ ಹಾವಿಗೆ ಪೂಜೆ.

ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ.



ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ ಸಂಕಷ್ಟದಲ್ಲಿದ್ದರೆ ಗೋವರ್ಧರನ್ ನೆರೆವಿಗೆ ದಾವಿಸ್ತಾರೆ. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡಿ ಗುಣಮುಖಗೊಂಡ ನಂತರ ಕಾಡಿಗೆ ಬಿಡುವ ಮೂಲಕ ಹಲವು ಬಾರಿ ಉರಗ ಪ್ರೇಮ ಮೆರೆದಿದ್ದಾರೆ. ಈ ವರೆಗೆ 1೦೦೦ ಕ್ಕೂ ಅಧಿಕ ಹಾವುಗಳ ಆರೈಕೆ ಮಾಡಿದ್ದಾರೆ.

ತನ್ನ ಆರೈಕೆಯಲ್ಲಿ ಇರುವ ಹಾವುಗಳಿಗೆ ತನು ಏರೆಯುವ ಮೂಲಕ ನಾಗರ ಪಂಚಮಿಯನ್ನು ಆಚಾರಿಸುತ್ತಾರೆ.

ಎಲ್ಲಾ ಕಡೆ ನಾಗಕಲ್ಲಿಗೆ ಪೂಜೆ ಪುನಸ್ಕಾರಗಳು ನಡೆಯುತ್ತೆ. ಆದ್ರೆ ಪಂಚಮಿಯಂದು ನಮ್ಮ ಮನೆಯಲ್ಲಿ ನಮ್ಮ ಮನೆಯವರು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ನಮ್ಮೆಲ್ಲರ ಭಾಗ್ಯ ಎನ್ನುತ್ತಾರೆ ಗೋರ್ವಧನ್ ಭಟ್.




ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...