Monday, 30 September 2024

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 


ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Sunday, 29 September 2024

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.




ಚೈತ್ರಾ ಕುಂದಾಪುರ ಅವರು ಉಡುಪಿ ಜಿಲ್ಲೆ ಕುಂದಾಪುರದವರು.. ಪ್ರಖರ ಭಾಷಣಕಾರರಾಗಿ ಗಮನ ಸೆಳೆದವರು.ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು.​ ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದರು ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.




ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಅಂತಾ ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ರಂತೆ. ಇದು ಚೈತ್ರಾ ಕುಂದಾಪುರ ಹಾಗೂ ಅವರ ಸಂಗಡಿಗರ ವಿರುದ್ಧ ಕೇಳಿ ಬಂದಿರೋ ಆರೋಪ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಅರೆಸ್ಟ್ ಮಾಡಿದ್ದರು, ಕೆಲವು ದಿನಗಳ ಕಾಲ ಜೈಲಿನಲ್ಲಿದ್ದ ಚೈತ್ರಾ ಬಳಿಕ ಜಾಮೀನಿನ ಮೇಲೆ ಬಂದಿದ್ದಾರೆ. ಇದೀಗ ಬಿಗ್ ಬಾಸ್ ಮನೆಗೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದಾರೆ. ಹಿಂದುತ್ವದ ಪ್ರಖರ ಭಾಷಣಗಾರ್ತಿಯಾಗಿರುವ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಹೇಗಿರುತ್ತಾರೆ ಅನ್ನೊಂದು ನೋಡಬೇಕಿದೆ.

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.


ಗುರುದತ್ ಕಾಮತ್ 


ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಬಹುಮುಖ ಪ್ರತಿಭೆಯ ಛಾಯಾಚಿತ್ರ ಕಲಾವಿದರಾದ ಕಾಮತ್ ರವರ ಗರಡಿಯಲ್ಲಿ ಹಲವಾರು ಛಾಯಾಚಿತ್ರ ಕಲಾವಿದರು ನೆಲೆಕಂಡಿಕೊಂಡಿದ್ದಾರೆ. ಛಾಯಾಗ್ರಹಣ ಕಾರ್ಯಾಗಾರವನ್ನು ಛಾಯಾ ಗ್ರಾಹಕರಿಗೋಸ್ಕರ ನಿರಂತರ ನಡೆಸುತಿದ್ದರು. 


ತಮ್ಮ ಕೈಚಳಕದ ಛಾಯಾಚಿತ್ರಗಳಿಗೆ ದೇಶ ವಿದೇಶಗಳಿಂದ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಶಿರೂರು ಶ್ರೀಗಳ ಪರ್ಯಾಯದ ಸಮಯದಲ್ಲಿ ದಿನ ನಿತ್ಯವೂ ಶ್ರೀ ಕೃಷ್ಣ ಪರಮಾತ್ಮನ ಅಲಂಕಾರದ ಛಾಯಾಚಿತ್ರ ಗಳನ್ನು ಹಾಗೂ ಶ್ರೀ ಕೃಷ್ಣ ಮಠದ ಎಲ್ಲಾ ಉತ್ಸವದ,  ಹಬ್ಬ ಹರಿ ದಿನಗಳ ಛಾಯಾ ಚಿತ್ರ ಗಳನ್ನು ಭಗದ್ಭಕ್ತರಿಗೆ ತಲುಪಿಸುತ್ತಿದ್ದ ಶ್ರೀ ಕೃಷ್ಣ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.

Monday, 23 September 2024

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.




ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಎದುರು ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Sunday, 22 September 2024

ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್​ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್​ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು ಎನ್ನಲಾಗಿದೆ. ಆ ಮೂಲಕ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ‌ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ.


ನೆಲಮಂಗಲ, ಸೆಪ್ಟೆಂಬರ್​ 22: 

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ. ಸಂಬಂಧಿಸಿದಂತೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಪರಸಂಗದ ಪೀಕಲಾಟಕ್ಕೆ ಮಹಿಳೆ ಕೊಲೆಯಾದಳಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸದ್ಯ ಈ ಪ್ರಕರಣ ಪೊಲೀಸರಿಗೆ ಚಾಲೆಂಜಿಂಗ್​ ಆಗಿದೆ. ಇದರ ಮಧ್ಯೆ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.



ಪದೇಪದೆ ಗಂಡನಿಗೆ ಕಿರುಕುಳ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು. ಹೇಮಂತ್ ದಾಸ್‌ನ ಎದೆ ಹಾಗೂ ಹೊಟ್ಟೆಗೆ ಕಚ್ಚುತ್ತಿದ್ದಳು. ಹಣದ ವಿಚಾರಕ್ಕೆ, ದಾಂಪತ್ಯದಲ್ಲಿ ಖುಷಿ ಇಲ್ಲವೆಂದು ಪದೇಪದೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ಬೇಸತ್ತ ಪತಿ ಹೇಮಂತ್ 2023ರ ಡಿಸೆಂಬರ್‌ 1ರಂದು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಇಡೀ ದಿನ ರಾಜಿ ಪಂಚಾಯಿತಿ ನಡೆಸಲಾಗಿತ್ತು.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

 ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಮೈಸೂರು (ಸೆ.21): ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘವು ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ಸತ್ಯ ಹೇಳುವ ಕೆಲಸವನ್ನ ಪತ್ರಿಕೆಗಳು ಮಾಡಬೇಕು. ಆದರೆ, ಇತ್ತೀಚೆಗೆ ಸುಳ್ಳು ಸುದ್ದಿ ಸೃಷ್ಟಿಸಿ ಮತ್ತೊಬ್ಬರನ್ನು ತೇಜೋವಧೆ ಮಾಡುವ ಕೆಲಸ ಹೆಚ್ಚಾಗುತ್ತಿದೆ ಎಂದರು.


ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಹೇಳಿದರು. ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ, ಪ್ರಕಟಿಸುವುದರಿಂದ ಧಾರ್ಮಿಕ, ಸಾಮಾಜಿಕ ಘರ್ಷಣೆಗಳು ಉಂಟಾಗಿ ನಮ್ಮ ಜೊತೆಯಲ್ಲಿರುವವರಿಗೆ ತೊಂದರೆಯಾಗಲಿದೆ. ಸುಳ್ಳು ಸುದ್ದಿ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.


Thursday, 5 September 2024

Sikkim: 800 ಅಡಿ ಆಳದ ಕಮರಿಗೆ ಉರುಳಿದ ಸೇನಾ ವಾಹನ: ನಾಲ್ವರು ಯೋಧರು ಹುತಾತ್ಮ.

ಸಿಕ್ಕಿಂ: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ, ಸೇನಾ ವಾಹನವೊಂದು 800 ಅಡಿ ಆಳದ ಕಂದರಕ್ಕೆ ಬಿದ್ದು 4 ಯೋಧರು ಹುತಾತ್ಮರಾಗಿದ್ದಾರೆ.




ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಜುಲುಕ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಸಿಲ್ಕ್ ರೂಟ್ ಎಂದೂ ಕರೆಯಲ್ಪಡುವ ರೀನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ವಾಹನ ಕಮರಿಗೆ ಉರುಳಿ ಬಿದ್ದಿದೆ, ಅಪಘಾತದಲ್ಲಿ ಕನಿಷ್ಠ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಯೋಧರನ್ನು ಮಧ್ಯಪ್ರದೇಶದ ಸೇನಾ ವಾಹನ ಚಾಲಕ ಪ್ರದೀಪ್ ಪಟೇಲ್, ಮಣಿಪುರದ ಕುಶಲಕರ್ಮಿ ಡಬ್ಲ್ಯೂ ಪೀಟರ್, ಹರಿಯಾಣದ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ಎಂದು ಗುರುತಿಸಲಾಗಿದೆ. ಎಲ್ಲಾ ಸೇನಾ ಸಿಬ್ಬಂದಿಗಳು ಪಶ್ಚಿಮ ಬಂಗಾಳದ ಬಿನಾಗೂರಿನ ಘಟಕಕ್ಕೆ ಸೇರಿದವರು ಎನ್ನಲಾಗಿದೆ.

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...