Sunday, 29 September 2024

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.


ಗುರುದತ್ ಕಾಮತ್ 


ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಬಹುಮುಖ ಪ್ರತಿಭೆಯ ಛಾಯಾಚಿತ್ರ ಕಲಾವಿದರಾದ ಕಾಮತ್ ರವರ ಗರಡಿಯಲ್ಲಿ ಹಲವಾರು ಛಾಯಾಚಿತ್ರ ಕಲಾವಿದರು ನೆಲೆಕಂಡಿಕೊಂಡಿದ್ದಾರೆ. ಛಾಯಾಗ್ರಹಣ ಕಾರ್ಯಾಗಾರವನ್ನು ಛಾಯಾ ಗ್ರಾಹಕರಿಗೋಸ್ಕರ ನಿರಂತರ ನಡೆಸುತಿದ್ದರು. 


ತಮ್ಮ ಕೈಚಳಕದ ಛಾಯಾಚಿತ್ರಗಳಿಗೆ ದೇಶ ವಿದೇಶಗಳಿಂದ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಶಿರೂರು ಶ್ರೀಗಳ ಪರ್ಯಾಯದ ಸಮಯದಲ್ಲಿ ದಿನ ನಿತ್ಯವೂ ಶ್ರೀ ಕೃಷ್ಣ ಪರಮಾತ್ಮನ ಅಲಂಕಾರದ ಛಾಯಾಚಿತ್ರ ಗಳನ್ನು ಹಾಗೂ ಶ್ರೀ ಕೃಷ್ಣ ಮಠದ ಎಲ್ಲಾ ಉತ್ಸವದ,  ಹಬ್ಬ ಹರಿ ದಿನಗಳ ಛಾಯಾ ಚಿತ್ರ ಗಳನ್ನು ಭಗದ್ಭಕ್ತರಿಗೆ ತಲುಪಿಸುತ್ತಿದ್ದ ಶ್ರೀ ಕೃಷ್ಣ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...