Monday, 23 September 2024

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.




ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಎದುರು ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Sunday, 22 September 2024

ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್​ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್​ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು ಎನ್ನಲಾಗಿದೆ. ಆ ಮೂಲಕ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ‌ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ.


ನೆಲಮಂಗಲ, ಸೆಪ್ಟೆಂಬರ್​ 22: 

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ. ಸಂಬಂಧಿಸಿದಂತೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಪರಸಂಗದ ಪೀಕಲಾಟಕ್ಕೆ ಮಹಿಳೆ ಕೊಲೆಯಾದಳಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸದ್ಯ ಈ ಪ್ರಕರಣ ಪೊಲೀಸರಿಗೆ ಚಾಲೆಂಜಿಂಗ್​ ಆಗಿದೆ. ಇದರ ಮಧ್ಯೆ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.



ಪದೇಪದೆ ಗಂಡನಿಗೆ ಕಿರುಕುಳ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು. ಹೇಮಂತ್ ದಾಸ್‌ನ ಎದೆ ಹಾಗೂ ಹೊಟ್ಟೆಗೆ ಕಚ್ಚುತ್ತಿದ್ದಳು. ಹಣದ ವಿಚಾರಕ್ಕೆ, ದಾಂಪತ್ಯದಲ್ಲಿ ಖುಷಿ ಇಲ್ಲವೆಂದು ಪದೇಪದೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ಬೇಸತ್ತ ಪತಿ ಹೇಮಂತ್ 2023ರ ಡಿಸೆಂಬರ್‌ 1ರಂದು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಇಡೀ ದಿನ ರಾಜಿ ಪಂಚಾಯಿತಿ ನಡೆಸಲಾಗಿತ್ತು.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

 ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಮೈಸೂರು (ಸೆ.21): ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘವು ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ಸತ್ಯ ಹೇಳುವ ಕೆಲಸವನ್ನ ಪತ್ರಿಕೆಗಳು ಮಾಡಬೇಕು. ಆದರೆ, ಇತ್ತೀಚೆಗೆ ಸುಳ್ಳು ಸುದ್ದಿ ಸೃಷ್ಟಿಸಿ ಮತ್ತೊಬ್ಬರನ್ನು ತೇಜೋವಧೆ ಮಾಡುವ ಕೆಲಸ ಹೆಚ್ಚಾಗುತ್ತಿದೆ ಎಂದರು.


ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಹೇಳಿದರು. ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ, ಪ್ರಕಟಿಸುವುದರಿಂದ ಧಾರ್ಮಿಕ, ಸಾಮಾಜಿಕ ಘರ್ಷಣೆಗಳು ಉಂಟಾಗಿ ನಮ್ಮ ಜೊತೆಯಲ್ಲಿರುವವರಿಗೆ ತೊಂದರೆಯಾಗಲಿದೆ. ಸುಳ್ಳು ಸುದ್ದಿ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.


Thursday, 5 September 2024

Sikkim: 800 ಅಡಿ ಆಳದ ಕಮರಿಗೆ ಉರುಳಿದ ಸೇನಾ ವಾಹನ: ನಾಲ್ವರು ಯೋಧರು ಹುತಾತ್ಮ.

ಸಿಕ್ಕಿಂ: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ, ಸೇನಾ ವಾಹನವೊಂದು 800 ಅಡಿ ಆಳದ ಕಂದರಕ್ಕೆ ಬಿದ್ದು 4 ಯೋಧರು ಹುತಾತ್ಮರಾಗಿದ್ದಾರೆ.




ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಜುಲುಕ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಸಿಲ್ಕ್ ರೂಟ್ ಎಂದೂ ಕರೆಯಲ್ಪಡುವ ರೀನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ವಾಹನ ಕಮರಿಗೆ ಉರುಳಿ ಬಿದ್ದಿದೆ, ಅಪಘಾತದಲ್ಲಿ ಕನಿಷ್ಠ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಯೋಧರನ್ನು ಮಧ್ಯಪ್ರದೇಶದ ಸೇನಾ ವಾಹನ ಚಾಲಕ ಪ್ರದೀಪ್ ಪಟೇಲ್, ಮಣಿಪುರದ ಕುಶಲಕರ್ಮಿ ಡಬ್ಲ್ಯೂ ಪೀಟರ್, ಹರಿಯಾಣದ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ಎಂದು ಗುರುತಿಸಲಾಗಿದೆ. ಎಲ್ಲಾ ಸೇನಾ ಸಿಬ್ಬಂದಿಗಳು ಪಶ್ಚಿಮ ಬಂಗಾಳದ ಬಿನಾಗೂರಿನ ಘಟಕಕ್ಕೆ ಸೇರಿದವರು ಎನ್ನಲಾಗಿದೆ.

Wednesday, 28 August 2024

ಕೋಲ್ಕತ್ತ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.





“ಈ ಘಟನೆಯಿಂದ ನಾನು ಭೀತಳಾಗಿದ್ದೇನೆ. ಸಮಾಜದ ಸಾಮೂಹಿಕ ಮರೆವಿನ ಪರಿಣಾಮದಿಂದ ಈ ಅಸಹ್ಯದ ಕೃತ್ಯ ನಡೆದಿದೆ’ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುರ್ಮು, “ಹೆಣ್ಣನ್ನು ಗಂಡಿನಂತೆಯೇ ಪೂರ್ಣ ರೀತಿಯಲ್ಲಿ ಮನುಷ್ಯರಂತೆ ಕಾಣದಿರುವುದು, ಕಡಿಮೆ ಶಕ್ತಿಶಾಲಿ, ಕಡಿಮೆ ಸಮರ್ಥಳು, ಕಡಿಮೆ ಬುದ್ಧಿವಂತಳು ಎಂದು ನೋಡುವ ಹೀನಾಯ ಮನಃಸ್ಥಿತಿಯಿಂದ ಕ್ರೂರ ಅತ್ಯಾಚಾರಗಳು ಸಂಭವಿಸುತ್ತಿವೆ. ಯಾವ ನಾಗರಿಕ ಸಮಾಜವೂ ತನ್ನ ಮಗಳು, ಸಹೋದರಿಯರನ್ನು ಇಂತಹ ದೌರ್ಜನ್ಯಕ್ಕೆ ಒಳಪಡಿಸುವುದಿಲ್ಲ. ಇದು ಅತಿಯಾಯಿತು. 2012ರಲ್ಲಿ ದಿಲ್ಲಿಯಲ್ಲಿ “ನಿರ್ಭಯಾ’ ಪ್ರಕರಣ ನಡೆದು 12 ವರ್ಷಗಳಾಗಿವೆ. ತದನಂತರವೂ ಅಸಂಖ್ಯಾಕ ಅತ್ಯಾಚಾರಗಳು ನಡೆದಿವೆ. ಈ ಸಾಮೂಹಿಕ ಮರೆವು ಅಸಹ್ಯಕರ’ ಎಂದು ಮುರ್ಮು ಹೇಳಿದ್ದಾರೆ.

“ಇತಿಹಾಸವನ್ನು ಎದುರಿಸಲು ಹೆದರುವ ಸಮಾಜಗಳು ಮಾತ್ರ ಸಾಮೂಹಿಕ ಮರೆವಿಗೆ ಶರಣಾಗುತ್ತವೆ. ಭಾರತ ಇತಿಹಾಸವನ್ನು ಎಲ್ಲ ರೀತಿಯಿಂದ ಎದುರಿಸಲೇಬೇಕು. ಇಂತಹ ವಿಕೃತಿಗಳ ವಿರುದ್ಧ ಸಮಗ್ರವಾದ ಕ್ರಮ ತೆಗೆದುಕೊಂಡು, ಈಗಲೇ ಅದನ್ನು ಹೊಸಕಿ ಹಾಕೋಣ’ ಎಂದು ರಾಷ್ಟ್ರಪತಿ ಮುರ್ಮು ಖಾರವಾದ ಶಬ್ದಗಳಲ್ಲಿ ಹೇಳಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿತ್ತು. ಬಳಿಕ ಬೆಲೊರೊ ವಾಹನದಿಂದ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ.



ಇನ್ನು ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿ ದರ್ಶನ್ ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಸೆಪ್ಟೆಂಬರ್ 11ಕ್ಕೆ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆಯಲಿದೆ.

Friday, 9 August 2024

ನಾಗರಪಂಚಮಿಗೆ ಇಲ್ಲಿ ಜೀವಂತ ಹಾವಿಗೆ ಪೂಜೆ.

ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ.



ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ ಸಂಕಷ್ಟದಲ್ಲಿದ್ದರೆ ಗೋವರ್ಧರನ್ ನೆರೆವಿಗೆ ದಾವಿಸ್ತಾರೆ. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡಿ ಗುಣಮುಖಗೊಂಡ ನಂತರ ಕಾಡಿಗೆ ಬಿಡುವ ಮೂಲಕ ಹಲವು ಬಾರಿ ಉರಗ ಪ್ರೇಮ ಮೆರೆದಿದ್ದಾರೆ. ಈ ವರೆಗೆ 1೦೦೦ ಕ್ಕೂ ಅಧಿಕ ಹಾವುಗಳ ಆರೈಕೆ ಮಾಡಿದ್ದಾರೆ.

ತನ್ನ ಆರೈಕೆಯಲ್ಲಿ ಇರುವ ಹಾವುಗಳಿಗೆ ತನು ಏರೆಯುವ ಮೂಲಕ ನಾಗರ ಪಂಚಮಿಯನ್ನು ಆಚಾರಿಸುತ್ತಾರೆ.

ಎಲ್ಲಾ ಕಡೆ ನಾಗಕಲ್ಲಿಗೆ ಪೂಜೆ ಪುನಸ್ಕಾರಗಳು ನಡೆಯುತ್ತೆ. ಆದ್ರೆ ಪಂಚಮಿಯಂದು ನಮ್ಮ ಮನೆಯಲ್ಲಿ ನಮ್ಮ ಮನೆಯವರು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ನಮ್ಮೆಲ್ಲರ ಭಾಗ್ಯ ಎನ್ನುತ್ತಾರೆ ಗೋರ್ವಧನ್ ಭಟ್.




ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...